Home ನಿಮ್ಮ ಜಿಲ್ಲೆ ಬೀದರ ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್

ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್

ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್

ಬೀದರ: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಬೀದರ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಅಗ್ರಶ್ರೇಣಿ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಸ್ಟ್ 15ರಂದು ನಗರದ ಶ್ರೀ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮAದಿರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.

ನಂತರ ಮಾತನಾಡಿದ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ತೋರಿದಾಗ ಅವರಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿನಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಇದೆ ರೀತಿ ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಹುದ್ದೆಗೆ ಏರಿ, ಸಮಾಜ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

ನಮ್ಮ ಜಿಲ್ಲೆಯಲ್ಲಿ ಪ್ರತಿಭೆಗೆ ಕೊರತೆ ಇಲ್ಲ ಎಂಬುದನ್ನು ತಾವುಗಳು ತೋರಿಸಿ ಕೊಟ್ಟಿದ್ದೀರಿ. ನಿಮಗೆ ಅಭಿನಂದನೆಗಳು ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು. ಭಾರತ ದೇಶದ ಬದಲಾವಣೆಗೆ ಮಾನ್ಯ ಪ್ರಧಾನಮಂತ್ರಿಗಳು, ನಾಡಿನ ಏಳ್ಗೆಗೆ ಮುಖ್ಯಮಂತ್ರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಶಿಕ್ಷಣ ಸಚಿವರ ಉತ್ತಮ ಕಾರ್ಯಯೋಜನೆಯಿಂದ ಶಾಲಾ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ ಎಂದು ತಿಳಿಸಿದ ಸಚಿವರು, ಸರ್ಕಾರಿ ಶಾಲೆಗಳು ಕೂಡ ಯಾವುದಕ್ಕೂ ಕಮ್ಮಿ ಇಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡೋಣ ಎಂದು ಸಚಿವರು ತಿಳಿಸಿದರು.

 

ಸಮಾರಂಭದಲ್ಲಿ ಸಂಸದ ಭಗವಂತ ಖೂಬಾ ಮಾತನಾಡಿ, ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗಲಿದೆ. ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಶೈಕ್ಷಣಿಕ ಕ್ಷೇತ್ರದ ಉತ್ತೇಜನಕ್ಕೆ ಶ್ರಮಿಸುತ್ತಿರುವ ಸಚಿವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಶಾಸಕರಾದ ರಹಿಂ ಖಾನ್ ಮಾತನಾಡಿ, ಶಿಕ್ಷಣಕ್ಕೆ ಬಹುದೊಡ್ಡ ತಾಕತ್ತಿದೆ. ಬಡವನೂ ದೊಡ್ಡ ಸ್ಥಾನದಲ್ಲಿ ಇರುವಂತೆ ಮಾಡುವುದು ಹಣವಲ್ಲ, ಶಿಕ್ಷಣದಿಂದ ಮಾತ್ರ ಅದು ಸಾಧ್ಯವಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ರಘುನಾಥ ಮಲ್ಕಾಪುರೆ ಅವರು ಮಾತನಾಡಿದರು. ಈ ವೇಳೆ ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಎಸ್ಪಿ ನಾಗೇಶ ಡಿ.ಎಲ್., ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಎಸ್., ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಎಚ್.ಸಿ., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಮೇಶ ಬೆಜಗಂ, ಶಾಹಿನ್ ಶಿಕ್ಷಣ ಸಂಸ್ಥೆಯ ಅಬ್ದುಲ್ ಖದೀರ್ ಮತ್ತು ಸಾಧಕ ವಿದ್ಯಾರ್ಥಿಗಳ ಪಾಲಕರು ಈ ವೇಳೆ ಹಾಜರಿದ್ದರು.

 

ಸನ್ಮಾನ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿನಲ್ಲಿ ಇಡೀ ಜಿಲ್ಲೆಗೆ ಮತ್ತು ಆಯಾ ತಾಲೂಕುಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇದೆ ವೇಳೆ ಸಚಿವರು ಬಹುಮಾನ ನೀಡಿ ಸನ್ಮಾನಿಸಿದರು.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…