ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಕೃಷಿ, ತೋಟಗಾರಿಕೆ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ

ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಬೀದರ: ಕೋವಿಡ್-19 ಹಿನ್ನೆಲೆಯಲ್ಲಿ ಏನೇ ಸವಾಲುಗಳಿದ್ದರೂ ಸರ್ಕಾರದ ಮಾರ್ಗಸೂಚಿಯನುಸಾರ ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ಶಿಕ್ಷಣ ಆರಂಭಕ್ಕೆ ಈಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು
ಆಗಸ್ಟ್ 13ರಂದು ಕೃಷಿ, ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಮಾತನಾಡದರು.
ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳಿಗೆ ವಠಾರ ಶಾಲೆಯಿಂದ ಪಾಠ ಮಾಡಲಾಗುತ್ತಿದೆ. ಬೀದರ ಜಿಲ್ಲೆಯಲ್ಲಿರುವ 1280 ಶಾಲೆಗಳ ಪೈಕಿ 3288 ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 7262 ಶಿಕ್ಷಕರು ಪಾಠ ಮಾಡುತ್ತಿದ್ದಾರೆ. 92,847 ಮಕ್ಕಳು ಭಾಗವಹಿಸುತ್ತಿದ್ದಾರೆ ಎಂದು ಶಿಕ್ಷಣಾಧಿಕಾರಿ
ಮಹಮ್ಮದ್ ಗುಲ್ಸಿನ್ ಅವರು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಆನ್ಲೈನ್ ಶಿಕ್ಷಣ ಪದ್ಧತಿಗೆ ಹೇಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಈಗಾಗಲೇ ಮೇಲಿಂದ ಮೇಲೆ ವಿಡಿಯೋ ಸಂವಾದ ನಡೆಸಿ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಇಂಟರನೆಟ್ ಸಮಸ್ಯೆ ಎದುರಾದರೆ ಏನು ಮಾಡಬಹುದು ಎಂಬುದರ ಬಗ್ಗೆ ಯೋಜಿಸಲಾಗುತ್ತಿದೆ. ಈಗಾಗಲೇ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ. ಸಿಆರ್ಪಿ ಮತ್ತು ಬಿಆರ್ಪಿಗಳು ಉತ್ತಮ ರೀತಿಯಲ್ಲಿ ಉಸ್ತುವಾರಿ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು
ಬೆಳೆ ಸಮೀಕ್ಷೆ, ಬೆಳೆ ವಿಮೆ ಮತ್ತು ಆನ್ಲೈನ್ ಶಿಕ್ಷಣ ಸೇರಿದಂತೆ ನಾನಾ ವಿಷಯಗಳು ಕುರಿತು ಮಾಹಿತಿ ಪಡೆದ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜಾ, ನೆರೆ ಎದುರಾದ ಈ ವೇಳೆಯಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಕೆಲವು ಇಲಾಖೆಗಳ ಪಾತ್ರ ಅತ್ಯಂತ ಅಮೂಲ್ಯವಾಗಿದ್ದು, ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 1,80,000 ಹೆಕ್ಟರ್ ಪ್ರದೇಶದಲ್ಲಿ ಸೋಯಾ, 80,000 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ. ಬೀದರ ಜಿಲ್ಲೆಯಲ್ಲಿ ಎಲ್ಲಾ ಬೆಳೆಗಳು ಚೆನ್ನಾಗಿವೆ. ಈ ವರ್ಷ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಂದಾಜು 2,13,000 ರೈತರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಇದು ರಾಜ್ಯದಲ್ಲಿ ಗರಿಷ್ಠ ಸಾಧನೆಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಾರಾಮನಿ ಜಿ.ಎಚ್. ಅವರು ಸಭೆಗೆ ಮಾಹಿತಿ ನೀಡಿದರು.
ಬಸವಕಲ್ಯಾಣ ತಾಲೂಕಿನಲ್ಲಿ ಮಳೆ ಹೆಚ್ಚಾಗಿ ಮುಡಬಿ, ಮಂಠಾಳ ಮತ್ತು ಕೊಹಿನೂರ ಹೋಬಳಿಗಳಲ್ಲಿ ಒಟ್ಟು 22 ಹಳ್ಳಿಗಳಲ್ಲಿ ಬೆಳೆಹಾನಿಯಾಗಿದೆ. ಮುಡಬಿ ಹೋಬಳಿಯಲ್ಲಿ ಅಂದಾಜು 2350 ಹೆಕ್ಟೇರ್, ಮಂಠಾಳ ಹೋಬಳಿಯಲ್ಲಿ ಅಂದಾಜು 1163 ಹೆಕ್ಟೇರ್ ಜೊತೆಗೆ ಕೋಹಿನೂರ ಹೋಬಳಿ ಸೇರಿದಂತೆ ಒಟ್ಟು 5976 ಹೆಕ್ಟೇರನಲ್ಲಿ ಬೆಳೆಹಾನಿಯಾಗಿದೆ. ಜೊತೆಗೆ ಔರಾದ್ ತಾಲೂಕಿನ ದಾಬಕಾ ಮತ್ತು ಸಂತಪುರ ಹೋಬಳಿ ವ್ಯಾಪ್ತಿಯಲ್ಲಿ ಕೂಡ ಅಂದಾಜು 30 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಆಯಾ ತಾಲೂಕುಗಳ ಅಧಿಕಾರಿಗಳು ತಿಳಿಸಿದ್ದು, ಈ ಕುರಿತು ಜಂಟಿ ಸರ್ವೆ ನಡೆಯುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಭಂವರಸಿAಗ್ ಮೀನಾ, ಬೀದರ ತಹಸೀಲ್ದಾರ ಗಂಗಾದೇವಿ, ಕೃಷಿ ಇಲಾಖೆಯ ಉಪ ನಿದೇಶಕರಾದ ಸೋಮಶೇಖರ ಬಿರಾದಾರ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಾವುಗೆ ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.
Date: 14-08-2020 www.kknewsonline.in ಹೆಚ್ಚಿನ ಸುದ್ದಿಗಳಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…
















