ಮಾಜಿ CM ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತ
ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೇಳಿಕೆ
ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಿದೆ ಕಾಂಗ್ರೆಸ್? ಎಂದು ಪ್ರಶ್ನಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಒಂದು ವೇಳೆ ಬಿಜೆಪಿಗೆ ಬಂದ್ರೆ ಸ್ವಾಗತಿಸುವುದಾಗಿ ಹೇಳುದ್ದಾರೆ.
ಅಂಬಿಗರ ಚೌಡಯ್ಯ ನಿಗಮ ಮಂಡಳಿಯ ಹುದ್ದೆ ನೀಡಿರುವುದು ಖುಷಿಯಾಗಿದೆ.
ಕೋಲಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ.
ನಾನು ಕೋಲಿ ಸಮಾಜದ ಚೌಕಿಧಾರ, 100 ಕೋಟಿ ನಿಗಮಕ್ಕೆ ಸಿಎಂ ಕೊಡುತ್ತಾರೆ ಎಂದ ಅವರು, ಸರಕಾರದ ಖಜಾನೆ ಭರಪೂರ ಆಗಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ತಿಳಿಸಿದ್ದಾರೆ.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















