Home ನಿಮ್ಮ ಜಿಲ್ಲೆ ಬೀದರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಶಿಕ್ಷೆ…!

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಶಿಕ್ಷೆ…!

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಶಿಕ್ಷೆ..!

ಬೀದರ್ : ಆದಾಯಕ್ಜಿಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ ನಗರದ ಸೆಷನ್ಸ್‌ ಹಾಗೂ ವಿಶೇಷ ನ್ಯಾಯಾಧೀಶರ ನ್ಯಾಯಾಲಯವು ಸರ್ಕಾರಿ ನೌಕರನಾಗಿದ್ದ ತುಳಸಿರಾಮಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ₹ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ತುಳಸಿರಾಮ ಅಣ್ಣೆಪ್ಪ ನಂದಗಾಂವೆ ಶಿಕ್ಷೆಗೆ ಒಳಗಾದವರು. ಇವರು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಅವರ ಆಪ್ತ ಕಾರ್ಯದರ್ಶಿಯಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಪ್ರಕಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯಕುಮಾರ ಎಂ. ಆನಂದಶೆಟ್ಟಿ, ಲಂಚ ನಿಷೇಧ ಕಾಯ್ದೆಯ ಅನ್ವಯ ಬುಧವಾರ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ದಂಡ ಭರಿಸಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ…

ಬೀದರ್‌ನ ಶಿವನಗರದ ತುಳಸಿರಾಮ ನಂದಗಾಂವೆ 1983ರ ಫೆಬ್ರುವರಿ 7ರಂದು ರೇಷ್ಮೆ ಇಲಾಖೆಯಲ್ಲಿ ರೇಷ್ಮೆ ಪ್ರದರ್ಶಕ ಹುದ್ದೆಗೆ ನೇಮಕಗೊಂಡಿದ್ದರು. ನಂತರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ನಿಯೋಜನೆ ಮೇಲೆ ಬೀದರ್ ದಕ್ಷಿಣ ಶಾಸಕರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಬೀದರ್ ಠಾಣೆಯ ಅಧಿಕಾರಿಗಳು 2008ರ ಡಿಸೆಂಬರ್ 30ರಂದು ತುಳಸಿರಾಮ ಅವರ ಬೀದರ್‌ನ ಶಿವನಗರದ ಮನೆ ಹಾಗೂ ಬೆಂಗಳೂರಿನ ಮಲ್ಲೇಶ್ವರಂನ ಬಾಡಿಗೆ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

ತನಿಖೆ ಸಂದರ್ಭದಲ್ಲಿ ತುಳಸಿರಾಮ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಲೊಕಾಯುಕ್ತ ಬೀದರ್ ಠಾಣೆಯ ಅಂದಿನ ಡಿವೈಎಸ್ಪಿ ಟಿ.ಜಿ. ರಾಯ್ಕರ್ ಅವರು ಲಂಚ ನಿಷೇಧ ಕಾಯ್ದೆಯಡಿ ತುಳಸಿರಾಮ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದಾಯಕ್ಕಿಂತ ₹ 36.76 ಲಕ್ಷ (ಶೇ 125.94) ಹೆಚ್ಚು ಆಸ್ತಿ ಹೊಂದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ತುಳಸಿರಾಮಗೆ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೇಶವರಾವ್ ಶ್ರೀಮಾಳೆ ವಾದ ಮಂಡಿಸಿದ್ದರು.

Date: 15-02-2024 – Time: 10:30am

Www.kknewsonline.in

 

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…