ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ : ಸಚಿವ ಪ್ರಭು ಚೌಹಾಣ್
ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ : ಸಚಿವ ಪ್ರಭು ಚೌಹಾಣ್
ಹುಬ್ಬಳ್ಳಿ: ಡಿಸೆಂಬರ್ 19: ಬೆಳಗಾವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿಕೆ ನೀಡಿದ್ದಾರೆ.

ನಗರದ ಸಿದ್ದಾರೂಢ ಮಠಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ ನಡೆದಿದೆ. ಕರ್ನಾಟಕ ನಮ್ಮ ತಾಯಿ ಇದಂತೆ. ತಾಯಿಯ ರಕ್ಷಣೆ ಮಾಡುವುದು ಎಲ್ಲ ಮಕ್ಕಳ ಜವಾಬ್ದಾರಿಯಾಗಿದೆ. ಈಗಾಗಲೇ ಸದನದಲ್ಲಿ ಈ ವಿಷಯ ಚರ್ಚೆಯಾಗಿದೆ. ಅವರ ಆಟಕ್ಕೆ ಸರ್ಕಾರ ಬ್ರೇಕ್ ಹಾಕುವ ನಿಟ್ಟಿನಲ್ಲೆ ಕೆಲಸ ಮಾಡುತ್ತಿದೆ. ಎಂ.ಇ.ಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
Date: 19-12-2021 :

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…














