ದಲ್ಲಾಳ್ಳಿಗಳು ಕಂಡುಬಂದಲ್ಲಿ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಸಚಿವ.
ಪ್ರಾದೇಶಿಕ ಸಾರಿಗೆ ಕಚೇರಿಗೆ ಸಚಿವರ ದಿಢೀರ್ ಭೇಟಿ
ಬೀದರ: ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಡಿ.31 ಮಂಗಳವಾರ ನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಬ್ರೋಕರ್ಗಳು ಕಂಡುಬಂದಲ್ಲಿ ನಾನೇ ಖುದ್ದು ಕಚೇರಿಯನ್ನು ಬಂದ್ ಮಾಡಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಆರ್ಟಿಓ ಅಧಿಕಾರಿಗೆ ಎಚ್ಚರಿಸಿದ ಘಟನೆ ನಡೆಸಿದೆ.
ಆರ್ಟಿಓ ಕಚೇರಿ ಎಂದರೆ ಬ್ರೋಕರ್ ಮಾಫಿಯಾ ಅನ್ನುವಂತ ಕೆಟ್ಟ ಹೆಸರಾಗುತ್ತಿದೆ. ಇದು ಹೋಗಬೇಕು. ಇನ್ನುಮುಂದೆ ಈ ಕಚೇರಿಯಲ್ಲಿ ಬ್ರೋಕರ್ಗಳು ಕಂಡುಬಂದಲ್ಲಿ ನಾನೇ ಖುದ್ದು ಕಚೇರಿಯನ್ನು ಬಂದ್ ಮಾಡಿಸುತ್ತೇನೆ ಎಂದು ಹೇಳಿದರು. ಕಚೇರಿ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಆರ್ಟಿಓ ಕಚೇರಿಯಲ್ಲಿ ಅಳವಡಿಸಿರುವ ಸಿಸಿಟಿವಿಯ ದೃಶ್ಯಾವಳಿಗಳನ್ನು ಕಳುಹಿಸುವಂತೆ ಅಲ್ಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಆರ್ಟಿಓ ಕಚೇರಿಯಲ್ಲಿ ಮಧ್ಯಸ್ಥಿಕೆದಾರರಿಗೆ ಅವಕಾಶವಿಲ್ಲ ಎನ್ನುವ ಬೋರ್ಡ್ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಸಾರಿಗೆ ಇಲಾಖೆಯ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದು, ನೇರವಾಗಿ ಆರ್ಟಿಓ ಕಚೇರಿಗೆ ಭೇಟಿ ನೀಡಿದ್ದಾಗಿ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿನ ಸೇವೆ ಜನತೆಗೆ ಸಮರ್ಪವಾಗಿ ಸಿಗಬೇಕು. ಒಂದು ವೇಳೆ ಕುಂದುಕೊರತೆ ಕಂಡುಬಂದಲ್ಲಿ ಅದನ್ನು ಜನಪ್ರತಿನಿಧಿಗಳಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ತಾವು ಈಗಾಗಲೇ ಜಿಲ್ಲೆಯ ಅಲ್ಲಲ್ಲಿ ದೂರು ಪೆಟ್ಟಿಗೆ ಸ್ಥಾಪಿಸಿದ್ದು, ಆರ್ಟಿಓ ಕಚೇರಿ ಬಗ್ಗೆ ಕೂಡ ಹೆಚ್ಚಿನ ದೂರುಗಳು ಬಂದಿವೆ. ಆರ್ಟಿಓ ಕಚೇರಿಯಲ್ಲಿ ಬ್ರೋಕರ್ ಹಾವಳಿ ಹೆಚ್ಚಾಗಿರುವ ಬಗ್ಗೆ ದೂರುಗಳಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು ತಾವು ದಿಢೀರ್ ಭೇಟಿ ನೀಡಿರುವುದಾಗಿ ತಿಳಿಸಿದರು.
Date: 31-12-2019 Time:5:30
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















