ದಾಬಾ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯ
ರೆಡ್ಡಿ ದಾಬದ ವೇಟರ್ ಕೊಲೆ
ಬೀದರ: ದಾಬಾದಲ್ಲಿ ಕೆಲಸ ಮಾಡುತ್ತಿದ ವೇಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹುಮನಾಬಾದ ಹೊರವಲಯದಲ್ಲಿ ನಡೆದಿದೆ.
ಕಾಳಗಿ ಮೂಲದ ಇಸ್ಮಾಯಿಲ್ ( 40 ವರ್ಷ) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಲ್ಲೆ ಕೆಲಸ ನಿರ್ವಹಿಸುತ್ತಿದ ಸೆಳಗಿ ಮೂಲದ ಮೈಲಾರಿ ಕೊಲೆಮಾಡಿದ್ದಾನೆ. ಹುಮನಾಬಾದ ಕಲಬುರಗಿ ರಸ್ತೆಯಲ್ಲಿನ ದಾಬಾದಲ್ಲಿ ಇವರು ವೇಟರ್ ಅಂತ ಕೆಲಸ ಮಾಡುತ್ತಿದ್ದರು. ರಾತ್ರಿ ದಾಬ ಮುಚ್ಚುವ ಸಂದರ್ಭದಲ್ಲಿ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.ದಾಬಾದಲ್ಲಿನ ಕಟ್ಟಿಗೆಯಿಂದ ಇಸ್ಮಾಯಿಲ್ ತಲೆಯ ಮೇಲೆ ಮತ್ತು ಕುತ್ತಿಗೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಹುಮನಾಬಾದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರುಮಾಡುದ್ದಾರೆ.
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















