Home ನಿಮ್ಮ ಜಿಲ್ಲೆ ಬೀದರ ಬೀದರ ಜಿಲ್ಲೆಯಲ್ಲಿ ನಿಲ್ಲದ ಕೊರೊನಾ ಹಾವಳಿ..!

ಬೀದರ ಜಿಲ್ಲೆಯಲ್ಲಿ ನಿಲ್ಲದ ಕೊರೊನಾ ಹಾವಳಿ..!

ಮುಸ್ಲಿಂ ಬಾಂಧವರು ಮನೆಯಲ್ಲಿಯೇ ರಂಜಾನ್ ಆಚರಣೆಗೆ ಡಿ.ಸಿ ಮನವಿ

ಬೀದರ ಜಿಲ್ಲೆಯಲ್ಲಿ ನಿಲ್ಲದ ಕೊರೊನಾ ಹಾವಳಿ..!

ಮುಸ್ಲಿಂ ಬಾಂಧವರು ಮನೆಯಲ್ಲಿಯೇ ರಂಜಾನ್ ಆಚರಣೆಗೆ ಡಿ.ಸಿ ಮನವಿ

ಬೀದರಃ ಬೀದರ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಈ ಬಾರಿ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಅದ್ದೂರಿಯಾಗಿ ಮನೆಯಲ್ಲಿಯೇ ಆಚರಣೆ ಮಾಡಬೇಕು. ಸಾಮೂಹಿಕ ಪ್ರಾರ್ಥನೆಗೆ ಯಾವುದೇ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ವಿವಿಧಡೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟಾರೆ 79 ಪ್ರಕರಣಗಳು ಪತ್ತೆಯಾಗಿವೆ. ಈ ವರೆಗೆ 12,000 ಸ್ಯಾಂಪಲ್ ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದಿಂದ ಬಂದಿರುವ ಜನರಲ್ಲಿ ಸೋಂಕು ಕಂಡು ಬರುತ್ತಿದ್ದು, ಹಬ್ಬದ ದಿನಗಳಲ್ಲಿ ಈ ಸೋಂಕು ಹರಡದಂತೆ ಜಿಲ್ಲೆಯ ಜನರು ಜಾಗೃತೆ ವಹಿಸಬೇಕು. ಸಮುದಾಯದ ಜನರು ಸ್ವಂತ ನಿಯಂತ್ರಣಕ್ಕೆ ಮುಂದಾಗಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಕಾಡಿಕೊಂಡು ರಸ್ತೆಗಳಲ್ಲಿ ಸಂಚರಿಸಬೇಕು. ಒಬ್ಬರಿಂದ ಇನ್ನೊಬ್ಬರಿಗೆ ಕೊರೊನಾ ಹರಡದಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಈ ಕುರಿತು ಸಂಸದ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದು, ಲಾಕ್ ಡೌನ್-4ರಲ್ಲಿ ಸಡಿಲಿಕೆ ನೀಡಿದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳಕೆ ಕಾರಣವಾಗಿದೆ. ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಕಂಡು ಬರುತ್ತಿದ್ದು, ಈ ಬಾರಿ ರಂಜಾನ್ ಹಬ್ಬವನ್ನು ಎಲ್ಲರೂ ಮನೆಯಲ್ಲಿಯೇ ನಮಾಜ್ ಮಾಡಿ ಕುಟುಂಬಸ್ಥರೊಂದಿಗೆ ಹಬ್ಬ ಆಚರಣೆ ಮಾಡಬೇಕು.. ಕೊರೊನಾ ಹಾವಳಿಗೆ ಯಾರೊಬ್ಬರು ಸಿಲುಕದಂತೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Date:24-05-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…