ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ.

ಮಲ್ಲಿಕಾರ್ಜುನ ಮಾಳಶೆಟ್ಟಿ ಅವರಿಗೆ ಸನ್ಮಾನ.
ಹುಮನಾಬಾದ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಮಾಳಶೆಟ್ಟಿ ಅವರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು ಸನ್ಮಾನಿಸಿ ಗೌರವಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ಅವಧಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೆ ಅಧ್ಯಕ್ಷ ಸ್ಥಾನದ ಜೊತೆಗೆ ರಾಜ್ಯ ಮಟ್ಟದಲ್ಲಿ ನಿರ್ದೇಶಕನಾಗಿ ಆಯ್ಕೆಗೊಳ್ಳುವ ಭಾಗ್ಯ ಬಂದಿರುವುದು ಶಾಸಕ ರಾಜಶೇಖರ ಪಾಟೀಲರು ಸಹಕಾರ ಮುಖ್ಯವಾಗಿದೆ. ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ನಮ್ಮ ಬ್ಯಾಂಕ್ ಮುಖಾಂತರ ರೈತರಿಗೆ ದೊರೆಯಬೇಕಾದ ಸವಲತ್ತುಗಳು ಅರ್ಹ ರೈತರಿಗೆ ಮುಟ್ಟಿಸಲಾಗುತ್ತಿದೆ ಎಂದು ತಿಳಿಸಿದರು.
Date:20-01-2021 : www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















