ಬೀದರ
ಬೀದರ- ಎರೆಡು ಕೊಲೆ.
ಬೀದರ: ಜಿಲ್ಲೆಯ ಎರೆಡುಕಡೆ ಎರೆಡು ಕೊಲೆ ಪ್ರಕರಣಗಳು ಬುಧವಾರ ಬೆಳಕಿಗೆ ಬಂದಿವೆ. ಬೀದರ ನಗರದ ಉಸ್ಮಾನ್ ಗಂಜ್ ವ್ಯಾಪ್ತಿಯಲ್ಲಿ ಡಿ.24ರ ರಾತ್ರಿ ಕೊಲೆ ಪ್ರಕರಣವೊಂದು ನಡೆದಿದ್ದು, ಮಹಮ್ಮದ್ ಅಕ್ಬರ (20) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಕ್ಷುಲಕ ಕಾರಣಕ್ಕೆ ಜಗಳ ನಡೆದು ಕೊಲೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಮನಾಬಾದ ತಾಲೂಕಿನ ಶಕ್ಕರಗಂಜ್ ವಾಡಿ ವ್ಯಾಕ್ತಿಯಲ್ಲಿ 23…
Read More »ಪ್ರತಿವರ್ಷದಂತೆ ಜಾತ್ರೆ ನಡೆಯಲ್ಲಿ ಶಾಸಕ ಪಾಟೀಲ.
ುಹುಮನಾಬಾದ: ಕುಲದೇವ ವೀರಭದ್ರೇಶ್ವರ ದೇವರ 2020ನೇ ಸಾಲಿನ ಜಾತ್ರಾ ಮಹೋತ್ಸವ ನಿಮಿತ್ಯ ಮಂಗಳವಾರ ದೇವಸ್ಥಾನದಲ್ಲಿ ಶಾಸಕ ರಾಜಶೇಖರ ಪಾಟೀಲ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು. ಸಭೆಯಲ್ಲಿ ಅನೇಕರು ಸಲಹೆಗಳು ನೀಡಿದರು. ಪ್ರತಿ ವರ್ಷದಂತೆ ಈ ವರ್ಷ ಕೂಡ ಜಾತ್ರಾ ಮಹೋತ್ಸ ನಡೆಯಲ್ಲಿದ್ದು, ಸಕಲರು ಪ್ರತಿ ವರ್ಷದತೆ ಸೇವೆ ಸಲ್ಲಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ಮಾಡಿದರು. ಸುತ್ತಲಿನ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸುವುದು ವಾಡಿಕೆಯಾಗಿದ್ದು,…
Read More »ಹುಮನಾಬಾದ- ವಿದ್ಯುತ್ ಜಾಗೃತಿ
ಹುಮನಾಬಾದ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ಹುಮನಾಬಾದ ಪಟ್ಟಣದ ವಿದ್ಯುತ್ ಕಛೇರಿ ಪ್ರಾಂಗಣದಲ್ಲಿ ಸೋಮವಾರ ಗ್ರಾಹಕರ ವಿದ್ಯುತ್ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಪಟ್ಟಣದ ಹಿರೇಮಠದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಚಾಲನೆ ನೀಡಿದರು. ತಹಸಿಲ್ದಾರ್ ನಾಗಯ್ಯಾ ಸ್ವಾಮಿ, ಸಿಪಿಐ ಜೆ.ಎಸ್ ನ್ಯಾಮಗೌಡರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ, ರಮೇಶ ಪವಾರ, ಅರವಿಂದ ಧುಮಾಳೆ, ಸಂಜುಕುಮಾರ ಕಾಡವಾದ, ರಣಧಿರ ಬಿರಾಜದಾರ್, ಶ್ರಿನಿವಾಸ ಬಿರಾದರ ಸೇರಿದಂತೆ ಅನೇಕರು ಇದ್ದರು.
Read More »ಕಡುಬಡವರಿಗಾಗಿ ಇರುವ ವಸತಿ ಯೋಜನೆಯಲ್ಲಿ ಪಾರದರ್ಶಕತೆ ಇರಲಿ
ಬೀದರ: ವಸತಿ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ವಿ.ಸೋಮಣ್ಣ ಅವರು ಡಿ.22ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಷ್ಮೆ, ವಸತಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ವಿವಿಧ ಗ್ರಾಮೀಣ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,…
Read More »ಸುಳ್ಳುಸುದ್ದಿ ನಂಬಬೇಡಿ-SP ಟಿ.ಶ್ರೀಧರ್
ಬೀದರ: ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ರ ಇರುವುದಿಲ್ಲ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ ಇರುವುದಾಗಿ ಸುಳ್ಳು ಸುದ್ದಿಗಳನ್ನು ಕೆಲವು ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿರುವುದು ಪೊಲೀಸ್…
Read More »ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ – ಸುಬೋಧ್ ಯಾದವ್
ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡ 30 ಲಕ್ಷ ವರೆಗಿನ ಕಾಮಗಾರಿಗಳನ್ನು 3 ತಿಂಗಳೊಳಗೆ, 30 ಲಕ್ಷದಿಂದ 1 ಕೋಟಿವರೆಗಿನ ಕಾಮಗಾರಿಗಳನ್ನು 5 ತಿಂಗಳೊಳಗೆ, 1 ಕೋಟಿ ರೂ.ನ ಕಾಮಗಾರಿಗಳನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಬೋಧ್ ಯಾದವ್ ಅವರು ಸಂಬಂಧಿಸಿದ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಗಡುವು ವಿದಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸೆಂಬರ್ 20ರಂದು ಸಭೆ ನಡೆಸಿ, ಕಲ್ಯಾಣ ಕರ್ನಾಟಕ…
Read More »ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸಿ
ಬೀದರ: ಬೀದರ ಜಿಲ್ಲೆಯಲ್ಲಿನ ಎಲ್ಲ ಅಂತ್ಯೋದಯ, ಆದ್ಯತಾ(ಬಿಪಿಎಲ್) ಹಾಗೂ ಆದ್ಯತೇತರ(ಎಪಿಎಲ್) ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಎಲ್ಲ ಸದಸ್ಯರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ಕೊಟ್ಟು ಇ-ಕೆವೈಸಿ(ಬೆರಳಚ್ಚು ಹೊಂದಾಣಿಕೆ, ಜಾತಿ ಪ್ರಮಾಣ ಪತ್ರ ಸಲ್ಲಿಕೆ ಮತ್ತು ಅಡುಗೆ ಅನಿಲ ಸಂಪರ್ಕ ಹೊಂದಿರುವ ಮಾಹಿತಿ) ಸಲ್ಲಿಸನೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಸೂಚಿಸಿದ್ದಾರೆ. ಇ-ಕೆವೈಸಿ ಮಾಹಿತಿ: 1) ಬಯೋ ದೃಢೀಕರಣ(ಬೆರಳಚ್ಚು ಹೊಂದಾಣಿಕೆ), ಪಡಿತರ ಚೀಟಿಯಲ್ಲಿ ಕುಟುಂಬದ ಹಿರಿಯ ಮಹಿಳೆಯನ್ನು…
Read More »ಜಿಲ್ಲೆಯ ಎಲ್ಲ ಸ್ಕ್ಯಾಯನಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ
ಬೀದರ: ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ೧೯೯೪ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲ ಸ್ಕ್ಯಾಯನಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ|ಹೆಚ್.ಆರ್.ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆಯಿಂದ ಕಾಯಕಲ್ಪ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ ಕುರಿತು ಡಿ.೧೭ರಂದು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಅಗತ್ಯವಿದ್ದಲ್ಲಿ ಪೋಲೀಸ್ ಇಲಾಖೆಯ ಸಹಾಯ…
Read More »ಕೆರೆಗಳ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿ: ಡಾ|ಹೆಚ್.ಆರ್.ಮಹಾದೇವ
ಬೀದರ: ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳನ್ನು ಸಮಗ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಡಿ.೧೮ರಂದು ನಡೆದ ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದಿಂದ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಕೆರೆಗಳ ಸ್ಥಿತಿಗತಿಯ ಬಗ್ಗೆ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಎಂಜಿನೀಯರಿAಗ್ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳಿಂದ…
Read More »ಮಾತು ತಪ್ಪಿದ ಬಿಜೆಪಿ ಪಕ್ಷದವರು..!
ದುರ್ಯೋಧನ ಹೂಗಾರ (ಕಸ್ತೂರಿ ಕಿರಣ ಪತ್ರಿಕೆಯ ಸುದ್ದಿ ಮುಖ್ಯಸ್ಥರು) ಬೀದರ: ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸುಮಾರು 9 ಕಿ.ಮಿ. ದೂರದ ರೇಷ್ಮೆ ಇಲಾಖೆಯ ಸುತ್ತಲ್ಲಿನ ಭೂಮಿಯಲ್ಲಿ ನಿರ್ಮಿಸವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹಾಗೂ ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿರುವುದು ಜನರಿಗೆ ಅನೇಕ ಅನುಮಾನ ಹುಟ್ಟುವಂತೆ ಮಾಡಿದೆ. ಹೌದು, ಈ ಹಿಂದಿನ ಸಿದ್ರಾಮಯ್ಯ…
Read More »


















