ಬೀದರ
ಸರ್ಕಾರಿ ಬಸ್ ಕಾರು ಮಧ್ಯೆ ಡಿಕ್ಕಿ ಇಬ್ಬರ ಸಾವು
ಹುಮನಾಬಾದ: ಬೀದರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರು ಮಧ್ಯೆ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಭಾಲ್ಕಿ ತಾಲ್ಲೂಕಿನ ಏಣಕೂರ್ ಗ್ರಾಮದವರು ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »22.4 ತೊಲೆ ಬಂಗಾರ, 210 ಗ್ರಾಂ. ಬೆಳ್ಳಿ ಜಪ್ತಿ
ಹುಮನಾಬಾದ: ಕಳೆದ ಆರು ತಿಂಗಳಲ್ಲಿ ಆರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ವಸಿಮ್ ಹಾಗೂ ಬಸವಕಲ್ಯಾಣ ಮೂಲದ ಶೇಖಬಾಬಾ ಸೇರಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ವಸಿಮ್ ಹುಮಾಬಾದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾಗ ಕಳ್ಳತನ ಮೂಲ ಬಹಿರಂಗವಾಗಿದೆ. ಇಬ್ಬರು ಆರೋಪಿಗಳು ಸೇರಿ ಒಟ್ಟು 33 ತೊಲೆ ಬಂಗಾರ ಹಾಗೂ 620 ಗ್ರಾಂ ಬೆಳ್ಳಿ ಕಳ್ಳತನ ಮಾಡಿದರು.ಈ ಪೈಕಿ…
Read More »ಕಳ್ಳರನ್ನು ಬಂಧಿಸಿದ ಪೊಲೀಸರು
ಹುಮನಾಬಾದ: ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಕಳ್ಳರನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿ ತಾಲೂಕಿನ ಬಿರಾಳ (ಕೆ) ಮೂಲದ ಸಚ್ಚಿನ ಬಂಧಿತ ಆರೋಪಿ. ಇನ್ನೊಬ್ಬ ಆರೋಪಿ ಶಿವಕುಮಾರ ಪರಾರಿ ಯಾಗಿದ್ದು ಪೊಲೀಸರು ಬಂಧಿಸಲು ಜಾಲ ಬೀಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ರವಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ ಆರೋಪಿಯಿಂದ 6 ದ್ವಿಚಕ್ರ ವಾಹನಗಳು ಐದು ಗ್ರಾಂ ಚಿನ್ನದ ಕಿವಿಯೋಲೆ ವಶಪಡಿಸಿಕೊಂಡಿದ್ದಾರೆ. ಆರು ದಿಚಕ್ರ ವಾಹನಗಳಲ್ಲಿ…
Read More »ಲೋಕಕಲ್ಯಾಣಕ್ಕಾಗಿ ಮೌನ ಅನುಷ್ಠಾನ
ಹುಮನಾಬಾದ: ಕಳೆದ 8 ವರ್ಷಗಳಿಂದ ಲೋಕಕಲ್ಯಾಣಕ್ಕಾಗಿ ಇಲ್ಲಿನ ಹಿರೇಮಠ ಸಂಸ್ಥಾನದ ಪೀಠಾಧಿಪತಿ ರೇಣುಕ ಗಂಗಾಧರ ಶಿವಾಚಾರ್ಯರು 21 ದಿನಗಳ ಕಾಲ ಮೌನ ಅನುಷ್ಠಾನ ನಡೆಸಲಿದ್ದಾರೆ. ದಿನಾಂಕ 26-11-2019 ರಿಂದ 16-12-2019ರ ವರಗೆ ಪಟ್ಟಣದ ಕುಲದೇವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿರಂತ 21 ದಿನಗಳ ಕಾಲ ಮೌನ ಅನುಷ್ಠಾನದ ಜತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪಟ್ಟಣದ ಹಿರೇಮಠಕ್ಕೆ ಪೀಠಾಧಿಪತಿಗಳಾದ ನಂತರ ಲೋಕ ಕಲ್ಯಾಣಕ್ಕಾಗಿ ಮೌನ ಅನುಷ್ಠಾನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ…
Read More »ಕಾಗದದ ವಿಮಾನ ಹಾರಿಸಿ ಆಕ್ರೋಷ
ಬೀದರ: ಬೀದರನಲ್ಲಿ ವಿಮಾನಯಾನ ಕಾಲಮಿತಿಯಲ್ಲಿ ಪ್ರಾರಂಭಿಸದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಎದುರಿಗೆ ಕಾಗದದ ವಿಮಾನ ಹಾರಿಸಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆದಿದೆ. ವಿರುಪಾಕ್ಷ ಗಾದಗಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರಿಗೆ ಘೇರಾವ ಹಾಕಿ ಯಾವ ಕಾರಣಕ್ಕೆ ಬೀದರ ನಲ್ಲಿ ವಿಮಾನಯಾನ ಸೇವೆ ಆರಂಭ ಆಗುತ್ತಿಲ್ಲ. ಎಲ್ಲಾ ಸೌಲಭ್ಯಗಳು ಇರುವ ಕಡೆಗೆ ಮೊದಲು ವಿಮಾನ ಹಾರಬೇಕಿತ್ತು. ಆದರೆ, ನೆರೆಯ…
Read More »ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಗಳಲ್ಲಿ ಸಾಂಸ್ಕೃತಿಕ ಭವನ
ಬೀದರ: ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಗಳಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಲು ಆದ್ಯತೆ ಕೊಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವರಾದ ಸಿ.ಟಿ.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾತ್ರ ಆಯೋಜಿಸಲಾಗಿದೆ.…
Read More »ವಿವೇಕಾನಂದ ಪ್ರತಿಮೆ ಭಗ್ನ-ಎಬಿವಿಪಿ ಪ್ರತಿಭಟನೆ
ಬೀದರ: ನವದಹೆಲಿಯ ಜವಾಹರ ಲಾಲ್ ನೆಹರು ವಿಶ್ವ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಭಗ್ನ ಗೊಳಿಸಿದ ಕೃತ್ಯ ಖಂಡಿಸಿ ನಗರದಲ್ಲಿ ಜಿಲ್ಲಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ನಗರದ ಸರಸ್ವತಿ ಕಾಲೇಜ್ ಮುಖ್ಯ ರಸ್ತೆಯಿಂದ ಆರಂಭಗೊ0ಡ ಪ್ರತಿಭಟನಾ ರ್ಯಾಲಿ ನಗರದ ಭಗತಸಿಂಗ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಸಿಡಿಲ ಸನ್ಯಾಸಿ…
Read More »ಬೀದರಕ್ಕೆ ಸಚಿವ ಸಿ.ಟಿ ರವಿ ಭೇಟಿ
ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಶನಿವಾರ ಬೀದರ ನಗರಕ್ಕೆ ಭೇಟಿನೀಡಿದ್ದು, ಮೊದಲಿಗೆ ಲಿಂಗಾಯತ್ ಮಠ, ನಂತರ ಗುರುನಾನಕ್ ಭೇಟಿನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಚಿವ ಸಿ.ಟಿ ರವಿ ಅವರನ್ನು ಸನ್ಮಾನಿಸಲಾಯಿತು. ನಂತರ ಬಿಜೆಪಿ ವತಿಯಿಂದ ನಡೆಯುತ್ತಿರುವ ಮಹಾತ್ಮ ಗಾಂದೀಜಿ ಅವರ 150ನೇ ಜನ್ಮದಿನದ ಗಾಂಧಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದರು. ಸಂಸದ ಭಗವಂತ ಖೂಬಾ, ಬಿಜೆಪಿ ಯುವ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ, ಎಂಎಲ್ಸಿ ರಘುನಾಥ್…
Read More »ಆಯುಕ್ತರಿಂದ ಮಹಿಳಾ ಮಹಾವಿದ್ಯಾಲಯ ಪರಿಶೀಲನೆ
ಬೀದರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ ಶ್ರವಣ್.ಪಿ ಜನವಾಡಾ ಹತ್ತಿರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಅಲ್ಲಿನ ಮೂಲಭೂತ ಸೌಕರ್ಯ, ಕಾಲೇಜಿನ ಬೇಕು ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಸರ್ಕಾರಿ ಕಟ್ಟಡವನ್ನು ನಮ್ಮ ಕಾಲೇಜಿಗೆ ತಾತ್ಕಾಲಿಕವಾಗಿ ಹಸ್ತಾಂತರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಜಾಗ ಮತ್ತು ಕಟ್ಟಡವನ್ನು ಖಾಯಂ…
Read More »ಲಿಂಗ ಪತ್ತೆ : ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ನಿಗಾ
ಬೀದರ: ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ್ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಅನುಷ್ಠಾನ ಕುರಿತಂತೆ ಸಭೆ ನಡೆಯಿತು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಇಂದುಮತಿ ಪಾಟೀಲ್ ಅವರು ಜಿಲ್ಲೆಯಲ್ಲಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯ ಅನುಷ್ಠಾನ ಕುರಿತಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. 1ಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಹೊಂದಿರುವ ಗರ್ಭಿಣಿ…
Read More »


















