ಬೆಂಗಳೂರು
ಬೀದರ ಜಿಲ್ಲೆ ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಬೇಕು.
ಬೆಂಗಳೂರು- ಬೀದರ ಜಿಲ್ಲೆಯಲ್ಲಿ ವಾಡಿಕೆಗಿಂದ ಕಡಿಮೆ ಮಳೆಯಾಗಿದ್ದು, ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಅಲ್ಲದೇ, ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಡಿದ ಸಾಲಮನ್ನಾ ಯೋಜನೆಯಲ್ಲಿ 1.17 ಲಕ್ಷ ರೈತರ ಖಾತೆಗೆ ಮಾತ್ರ ಹಣ ಜಮೆಗೊಂಡಿದ್ದು, ಇನ್ನೂ ಉಳಿದ ರೈತರಿಗೆ ತಕ್ಷಣ ಸಾಲ ಮನ್ನಾದ ಹಣ ಜಮಾವಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.…
Read More »ಪರಮೇಶ್ವರ ಮನೆಮೇಲೆ ಐಟಿ ದಾಳಿ
ಬೆಂಗಳೂರು- ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿ ಶಿಕ್ಷಣಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಸಿದ್ದಾರ್ಥ ಕಾಲೇಜು, ಪದವಿ ಕಾಲೇಜು ಸೇರಿದಂತೆ ಅವರ ನಿವಾಸದಮೇಲು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಪರಮೇಶ್ವರ ಅವರ ಆಪ್ತನ ಮನೆ ಮೇಲೂ ದಾಳಿ ನಡೆದಿರುವ ಬಗ್ಗೆ ತಿಳಿದುಬಂದಿದೆ. ಐಟಿ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Read More »ನೇರ ಪ್ರಸಾರಕ್ಕೆ ವಿನಂತಿ – ಮುಖ್ಯಮಂತ್ರಿ BSY
ಬೆಂಗಳೂರು- ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಟಿವಿಗಳ ನೇರ ಪ್ರಸಾರಕ್ಕೆ ತಡೆ ಹಾಕಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಮಾಧ್ಯಮ ಸ್ವಾತಂತ್ರಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ವಿವಿಧ ಮಾಧ್ಯಮಗಳು ಬುಧವಾರ ಸಂಜೆಯಿಂದ ರಾಜ್ಯ ಸರಕಾರದ ವಿರುದ್ದ ಅನೇಕರೀತಿಯ ಟೀಕೆಗಳು ಮಾಡಿದವು.
Read More »











