ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್
ಕೇಂದ್ರ ಸರ್ಕಾರ ರೈತ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಮೆಚ್ಚುಗೆ
![]()
ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್
ತುಮಕೂರು: ರೈತ ತನಗೆ ತಾನೇ ಸರ್ಟಿಫಿಕೇಟ್ ಕೊಡುವಂತಹ ರೈತನಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಬೆಳೆ ಸಮೀಕ್ಷೆ ಇದಾಗಿದ್ದು, 74ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ತಾನೇ ತನ್ನ ಹೊಲದ ಬಗ್ಗೆ ಸರ್ಟಿಫಿಕೇಟ್ ಕೊಡುವಂತಹ ಆ್ಯಪ್ ಇದಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ತುಮಕೂರಿನ ಕೊರಗ್ರಾಮದ ರೈತರೊಬ್ಬರ ಜಮೀನಿಗೆ ಭೇಟಿ ನೀಡಿದ ಕೃಷಿ ಸಚಿವರು ಆ್ಯಪ್ ಕುರಿತು ಪ್ರಾತ್ಯಕ್ಷಿತೆ ಮೂಲಕ ರೈತರಿಗೆ ವಿವರ ನೀಡಿದರು. ರೈತರೇ ತಮ್ಮ ಜಮೀನಿನ ಸಮೀಕ್ಷೆಯನ್ನು ನಡೆಸುವ ರೈತಬೆಳೆ ಸಮೀಕ್ಷೆ ಆ್ಯಪ್ ಕುರಿತು ಪ್ರಾತ್ಯಕ್ಷಿತೆ ನಡೆಸಿದರು.
![]()
ಸ್ವಾಭಿಮಾನಿ ರೈತ ತನ್ನ ಬೆಳೆ ಸಮೀಕ್ಷೆಯನ್ನು ತಾನೇ ನಡೆಸಿ ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯಬಹುದಾದ ಮಹತ್ತರ ಯೋಜನೆಯಿದಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಬೆಳೆ ವಿವರ ದಾಖಲಿಸಬೇಕು. ಇದೂವರೆಗೂ ಗ್ರಾಮದ ಪಿಆರ್ಓ ಗಳು ಬೆಳೆ ಸಮೀಕ್ಷೆ ನಡೆಸುತ್ತಿದ್ದರು.ಕೆಲವೆಡೆ ಬೆಳೆ ಸಮೀಕ್ಷೆ ತಾಳೆಯಾಗದಿರುವುದು ಗಮನಕ್ಕೆ ಬಂದಿರುತ್ತದೆ. ಹೀಗಾಗಿ ಈ ಆ್ಯಪ್ ಜಾರಿಗೊಳಿಸಲಾಗಿದೆ. ರೈತರೇ ತಮ್ಮ ಬೆಳೆ ಸಮೀಕ್ಷೆ ನಡೆಸುವ ವಿವರ ದಾಖಲಿಸುವ ಇಂತಹ ಬೆಳೆ ಸಮೀಕ್ಷೆ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಲೋಕಾರ್ಪಣೆಗೊಂಡಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ರೈತ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬೇರೆ ರಾಜ್ಯಗಳಿಗೂ ಇದು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಿದರು. ನಿಗದಿತ ದಿನಾಂಕದೊಳಗೆ ಆ್ಯಪ್ ಡೌನ್ಲೊಡ್ ಮಾಡಿಕೊಂಡು ವಿವರ ದಾಖಲಿಸಬೇಕು. ರೈತರೇ ಸ್ವತಃ ಬೆಳೆ ವಿವರ ದಾಖಲಿಸಿ ಫೋಟೋ ಅಪ್ಲೋಡ್ ಮಾಡಬೇಕು. ಯಾವುದೇ ಕಾರಣಕ್ಕೂ ಈ ಸದಾವಕಾಶದಿಂದ ರೈತರು ವಂಚಿತರಾಗಬಾರದು ಎಂದು ಸಚಿವರು ತಿಳಿಸಿದರು.

Date: 14-08-2020 www.kknewsonline.in ಹೆಚ್ಚಿನ ಸುದ್ದಿಗಳಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















